ಥೈಲ್ಯಾಂಡ್ ನಲ್ಲಿ ಸ್ಪಂದನಾ ಮರಣೋತ್ತರ ಪರೀಕ್ಷೆ ಮುಕ್ತಾಯ: ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಬೆಂಗಳೂರಿಗೆ ಮೃತದೇಹ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಹೃದಯಾಘಾತದಿಂದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಬ್ಯಾಂಕಾಕ್ ನಲ್ಲಿ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ.

ಮಧ್ಯಾಹ್ನದ ವೇಳೆಗೆ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಗುವುದು. ಥೈಲ್ಯಾಂಡ್ ನಲ್ಲಿ ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಸ್ಪಂದನಾ ಮೃತದೇಹ ಸ್ಥಳಾಂತರ ಮಾಡಲಿದ್ದು, ಮಧ್ಯಾಹ್ನದ ವೇಳೆಗೆ ಥೈಲ್ಯಾಂಡ್ ನಿಂದ ಇಂಡಿಗೋ ವಿಮಾನದಲ್ಲಿ ಇಲ್ಲವೇ ಥಾಯ್ ಏರ್ ಲೈನ್ಸ್ ನಲ್ಲಿ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ.

ಇಂದು ರಾತ್ರಿ ವೇಳೆಗೆ ಸ್ಪಂದನಾ ಮೃತದೇಹ ಬೆಂಗಳೂರು ತಲುಪಲಿದೆ. ಕೆಂಪೇಗೌಡ ಏರ್ಪೋರ್ಟ್ ಗೆ ಸ್ಪಂದನಾ ಪಾರ್ಥಿವ ಶರೀರ ತರಲಿದ್ದು, ಅಲ್ಲಿಂದ ನಿವಾಸಕ್ಕೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ನಾಳೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read