‘ಕರ್ನೂಲ್ ಬಸ್’ ದುರಂತದ ಬೆನ್ನಲ್ಲೇ ಬೆಂಗಳೂರಲ್ಲಿ ವಿಶೇಷ ತಪಾಸಣೆ : 63 ವಾಹನಗಳು ಜಪ್ತಿ

ಬೆಂಗಳೂರು : ಬೆಂಗಳೂರು ನಗರ ಹಾಗೂ ಹೊರ ವಲಯಗಳಲ್ಲಿ ಅಪರ ಸಾರಿಗೆ ಆಯುಕ್ತರ (ಪ್ರವರ್ತನ ದಕ್ಷಿಣ) ನೇತೃತ್ವದಲ್ಲಿ ಒಟ್ಟು 12 ತಂಡಗಳನ್ನು ರಚಿಸಿಕೊಂಡು ವಿಶೇಷ ತಪಾಸಣೆಯನ್ನು ನಡೆಸಲಾಯಿತು.

ಅಕ್ಟೋಬರ್ 24 ರಿಂದ ಅಕ್ಟೋಬರ್ 30 ರವರೆಗೆ ಅತ್ತಿಬೆಲೆ ಹಾಗೂ ದೇವನಹಳ್ಳಿ ಸಮೀಪದಲ್ಲಿ ಕಾರ್ಯಚರಣೆ ಕೈಗೊಂಡು ಪ್ರಯಾಣಿಕರ ಸುರಕ್ಷತಾ ಅಂಶಗಳಾದ ತುರ್ತು ನಿರ್ಗಮನ ವ್ಯವಸ್ಥೆ, ಬೆಂಕಿ ನಂದಿಸುವ ಸಾಧನ, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಪ್ರಯಾಣಿಕರ ವಾಹನಗಳಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಸರಕುಗಳ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಲಾಯಿತು. ತೆರಿಗೆ ಪಾವತಿಸದೇ ಮತ್ತು ರಹದಾರಿ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು ಸುಮಾರು 380ಕ್ಕೂ ಹೆಚ್ಚು ಖಾಸಗಿ ಬಸ್ಸುಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡು, ಸುಮಾರು 63 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ವಿಶೇಷ ಕಾರ್ಯಚರಣೆಯ ಸಂದರ್ಭದಲ್ಲಿ ವಾಹನಗಳನ್ನು ಜಪ್ತಿಗೊಳಿಸುವಾಗ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಬಿಎಂಟಿಸಿ, ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಸುಗಳನ್ನು ವ್ಯವಸ್ಥೆಗೊಳಿಸಿ, ಪ್ರಯಾಣಿಕರಿಗೆ ಅನುಕೂಲವನ್ನು ಕಲ್ಪಿಸಲಾಯಿತು.

ಪ್ರಯಾಣಿಕರ ವಾಹನಗಳಲ್ಲಿ ಸರಕು ಸಾಗಿಸುತ್ತಿರುವ ಬಗ್ಗೆ ವಾಹನದ ಮಾಲೀಕರಿಗೆ ಹಾಗೂ ಸಿಬ್ಬಂದಿಯವರಿಗೆ ಅನಧಿಕೃತ ಸರಕು ಸಾಗಿಸದಂತೆ ಜಾಗೃತಿಯನ್ನೂ ಸಹ ಮೂಡಿಸಲಾಯಿತು. ಕಾರ್ಯಚರಣೆ ವೇಳೆಯ ಸಂದರ್ಭದಲ್ಲಿ ಸರಕುಸಾಗಣಿಕೆ ಹಾಗೂ ರಹದಾರಿ ಉಲ್ಲಂಘನೆ ಪ್ರಕರಣ ದಾಖಲಿಸಿ, ಅರ್ಹತಾ ಪತ್ರ(FC) ನೋಂದಣಿ ಪತ್ರದ (RC) ಅಮಾನತ್ತಿನ ಕುರಿತು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read