alex Certify ಬಡ ಮಕ್ಕಳ ಸಂಕಷ್ಟಕ್ಕೆ ಮಿಡಿದ ವಿರಾಟ್ ಹೃದಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಡ ಮಕ್ಕಳ ಸಂಕಷ್ಟಕ್ಕೆ ಮಿಡಿದ ವಿರಾಟ್ ಹೃದಯ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೈದಾನದಲ್ಲಿ ಮಾತ್ರ ಚಾಂಪಿಯನ್ ಅಲ್ಲ, ಇತ್ತೀಚೆಗೆ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಸಾಮಾಜಿಕ ಕಳಕಳಿಯನ್ನೂ ಮೆರೆಯುತ್ತಿದ್ದಾರೆ. ಬಡ ಮಕ್ಕಳಿಗಾಗಿ ಮಿಡಿದಿರುವ ವಿರಾಟ್ ಇದೀಗ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಲು ಮುಂದಾಗಿದ್ದಾರೆ.

ಅಪೌಷ್ಟಿಕತೆಯಿಂದ ಬಳಲುತ್ತಿರುವ 10 ಸಾವಿರ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ನಿರ್ಧರಿಸಿದ್ದು, ವೈದ್ಯಕೀಯ ಸಂಸ್ಥೆಯೊಂದರ ಉತ್ಪನ್ನಗಳ ರಾಯಭಾರಿಯಾಗಿರುವ ವಿರಾಟ್ ಆ ಸಂಸ್ಥೆಯಿಂದ ಬರುವ ಲಾಭವನ್ನು ಬಡ ಮಕ್ಕಳ ಆಹಾರಕ್ಕೆ ನೀಡಲು ನಿರ್ಧರಿಸಿದ್ದಾರಂತೆ.

ಟೀಂ ಇಂಡಿಯಾ ನಾಯಕನ ಸಾಮಾಜಿಕ ಕಳಕಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...