ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುತ್ತಿರುವ ನಾಲ್ಕನೇ ಹಂತದ ಲಾಕ್ ಡೌನ್ ಕುರಿತು ಕೇಂದ್ರ ಸರ್ಕಾರ ಈಗ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರಗಳಿಗೆ ಕೆಲವೊಂದು ಮಹತ್ವದ ಅಧಿಕಾರವನ್ನು ನೀಡಲಾಗಿದೆ.
ಕೊರೊನಾ ಸೋಂಕಿನ ಪ್ರಮಾಣವನ್ನು ಆಧರಿಸಿ ಗ್ರೀನ್, ಆರೆಂಜ್ ಹಾಗೂ ರೆಡ್ ಜೋನ್ ನಿರ್ಧರಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ. ಇದರ ಜೊತೆಗೆ ಅಂತರ್ ರಾಜ್ಯ ಸಂಚಾರದ ಕುರಿತು ರಾಜ್ಯ ಸರ್ಕಾರವೇ ನಿರ್ಧರಿಸಬೇಕಿದೆ.
ಇದರ ಜೊತೆಗೆ ಪ್ರೇಕ್ಷಕರಿಲ್ಲದೆ ಕ್ರೀಡಾಕೂಟ ನಡೆಸುವ ಕುರಿತು ಕೇಂದ್ರ ಸರ್ಕಾರ ಹಸಿರು ನಿಶಾನೆ ನೀಡಿದೆ ಎನ್ನಲಾಗಿದ್ದು, ಹೀಗಾಗಿ ಮುಂದೂಡಲ್ಪಟ್ಟಿರುವ ಐಪಿಎಲ್ ಪಂದ್ಯಾವಳಿಗಳು ನಡೆಯಲಿದೆಯಾ ಎಂಬ ಪ್ರಶ್ನೆ ಮೂಡಿದೆ.