alex Certify ಶಾಕಿಂಗ್ ಸಂಗತಿ ಬಿಚ್ಚಿಟ್ಟ ಕರ್ನಾಟಕದ ಕ್ರಿಕೆಟಿಗ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ಸಂಗತಿ ಬಿಚ್ಚಿಟ್ಟ ಕರ್ನಾಟಕದ ಕ್ರಿಕೆಟಿಗ…!

ಅಮೆರಿಕಾದ ಮಿನಿಯಾಪೊಲೀಸ್ ನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಆಫ್ರಿಕಾ ಮೂಲದ ಅಮೆರಿಕನ್ ಪ್ರಜೆ ಜಾರ್ಜ್ ಫ್ಲಾಯ್ಡ್ ಎಂಬಾತನ ಕುತ್ತಿಗೆ ಮೇಲೆ ಕಾಲಿಟ್ಟು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣದ ಬಳಿಕ ಅಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಹೀಗಾಗಿ ವಿಶ್ವದ ಎಲ್ಲೆಡೆ ವರ್ಣಭೇದ ನೀತಿಯ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಖ್ಯಾತ ಕ್ರಿಕೆಟಿಗ ಕ್ರಿಸ್ ಗೇಲ್ ಕ್ರಿಕೆಟ್ ನಲ್ಲೂ ವರ್ಣಭೇದ ನೀತಿ ಇದೆ ಎಂದು ಹೇಳಿಕೆ ನೀಡಿದ ಬಳಿಕ ಇದೀಗ ಕರ್ನಾಟಕದ ಕ್ರಿಕೆಟಿಗ ದೊಡ್ಡ ಗಣೇಶ್ ಶಾಕಿಂಗ್ ಸಂಗತಿಯೊಂದನ್ನು ಬಿಚ್ಚಿಟ್ಟಿದ್ದಾರೆ.

ತಾವು ಭಾರತೀಯ ತಂಡದಲ್ಲಿದ್ದ ಸಂದರ್ಭದಲ್ಲಿ ಜನಾಂಗಿಯ ನಿಂದನೆ ಎದುರಿಸಿದ್ದನ್ನು ನೆನಪಿಸಿಕೊಂಡಿರುವ ದೊಡ್ಡ ಗಣೇಶ್, ಆ ದಿಗ್ಗಜ ಆಟಗಾರ ನಾನು ಭಾರತ ಹಾಗೂ ಕರ್ನಾಟಕದ ಪರ ಆಟವಾಡುವುದನ್ನು ತಡೆಯಲು ಸಾಧ್ಯವಾಗಲಿಲ್ಲ. ಕಪ್ಪಗಿರುವವರೂ ಮನುಷ್ಯರೇ. ಮೊದಲು ಮಾನವರಾಗಿ ಎಂದು ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...