alex Certify ಸುರೇಶ್ ರೈನಾ ಸ್ಥಾನ ಪಡೆಯಲು ವಿಫಲವಾದ ಹಿಂದಿನ ಕಾರಣ ಬಿಚ್ಚಿಟ್ಟ ಬಿಸಿಸಿಐ ಮಾಜಿ ಅಧ್ಯಕ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುರೇಶ್ ರೈನಾ ಸ್ಥಾನ ಪಡೆಯಲು ವಿಫಲವಾದ ಹಿಂದಿನ ಕಾರಣ ಬಿಚ್ಚಿಟ್ಟ ಬಿಸಿಸಿಐ ಮಾಜಿ ಅಧ್ಯಕ್ಷ

ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸುರೇಶ್ ರೈನಾ ಸ್ಥಾನ ಗಿಟ್ಟಿಸುವಲ್ಲಿ ವಿಫಲವಾಗಿದ್ದರು. ಈ ಕುರಿತು ಇತ್ತೀಚೆಗೆ ಈ ಕುರಿತು ಮಾತನಾಡಿದ್ದ ರೈನಾ, ನನ್ನಲ್ಲಿ ಏನಾದರೂ ಕೊರತೆ ಇದ್ದರೆ ಹೇಳಿ. ಕಠಿಣ ಪರಿಶ್ರಮ ಪಟ್ಟು ತಿದ್ದಿಕೊಳ್ಳುತ್ತೇನೆ ಎಂದು ಹೇಳಿದ್ದರು.

ಇದೀಗ ಬಿಸಿಸಿಐ ಆಯ್ಕೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಎಂ.ಎಸ್.ಕೆ. ಪ್ರಸಾದ್, ಸುರೇಶ್ ರೈನಾ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಲು ವಿಫಲವಾಗಿದ್ದರ ಹಿಂದಿನ ಕಾರಣವನ್ನು ಬಹಿರಂಗಗೊಳಿಸಿದ್ದಾರೆ.

ದೇಶಿ ಕ್ರಿಕೆಟ್ ನಲ್ಲಿ ಸುರೇಶ್ ರೈನಾ ನಿರೀಕ್ಷಿತ ಸಾಧನೆ ಮಾಡದ ಕಾರಣ ಅವರನ್ನು ಭಾರತ ಕ್ರಿಕೆಟ್ ತಂಡಕ್ಕೆ ಪರಿಗಣಿಸಲು ಸಾಧ್ಯವಾಗಲಿಲ್ಲ ಎಂದು ಎಂ.ಎಸ್.ಕೆ. ಪ್ರಸಾದ್ ಹೇಳಿದ್ದಾರೆ. 2018-19 ರ ರಣಜಿ ಟೂರ್ನಿಯಲ್ಲಿ ಸುರೇಶ್ ರೈನಾ ತಾವು ಆಡಿದ 5 ಪಂದ್ಯಗಳಿಂದ 243 ರನ್ ಗಳಿಸಿದ್ದರು. ಇದರಲ್ಲಿ ಎರಡು ಅರ್ಧ ಶತಕ ಸೇರಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...