alex Certify ಸೋಲಿನ ಹಿಂದಿನ ಕಾರಣ ಬಿಚ್ಚಿಟ್ಟ ಮಹೇಂದ್ರ ಸಿಂಗ್ ಧೋನಿ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಲಿನ ಹಿಂದಿನ ಕಾರಣ ಬಿಚ್ಚಿಟ್ಟ ಮಹೇಂದ್ರ ಸಿಂಗ್ ಧೋನಿ….!

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ 13ನೇ ಆವೃತ್ತಿಯ ಐಪಿಎಲ್ ನಡೆಯುತ್ತಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬವೇ ಆಗಿದೆ. ಕೊರೊನಾದಿಂದ ಮನೆಯಿಂದ ಹೊರಹೋಗದೇ ಕಂಗೆಟ್ಟಿದ್ದ ಅದೆಷ್ಟೋ ಜನಕ್ಕೆ ಐಪಿಲ್ ಹಬ್ಬದೂಟ ನೀಡುತ್ತಿದೆ.

ಈ ಆವೃತ್ತಿಯಲ್ಲಿ 14 ಪಂದ್ಯಗಳು ಮುಗಿದಿವೆ. ನಿನ್ನೆಯೂ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡದ ನಡುವೆ ಹಣಾಹಣಿ ಇತ್ತು.

ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಧೋನಿ ಟೀಮ್ ಸೋಲನ್ನನುಭವಿಸಿತು. ತಮ್ಮ ಸೋಲಿನ ಕುರಿತಾಗ ಮಾತನಾಡಿದ ಧೋನಿ ಸೋಲಿಗೆ ಕಾರಣ ಏನು ಎಂಬುದನ್ನು ಬಹಿರಂಗ ಪಡಿಸಿದರು. ಹಾಗೆಯೇ ಮುಂದಿನ ಪಂದ್ಯಗಳಲ್ಲಿ ಈ ತಪ್ಪುಗಳನ್ನು ಮಾಡದಿರಲು ತಮ್ಮ ತಂಡಕ್ಕೆ ಸೂಚಿಸಿದರು.

ಇದೇ ವೇಳೆ ಮಾತನಾಡಿದ ಮಹೇಂದ್ರ ಸಿಂಗ್ ಧೋನಿ, ನಾವು ಪಂದ್ಯಗಳಲ್ಲಿ ಅನೇಕ ತಪ್ಪುಗಳನ್ನು ಮಾಡಿದ್ದೇವೆ. ಆ ತಪ್ಪುಗಳನ್ನು ಸರಿ ಮಾಡಿಕೊಳ್ಳುವ ಅವಶ್ಯಕತೆ ಇದೆ. ನೋ ಬಾಲ್, ಕ್ಯಾಚ್ ಮಿಸ್ ಹೀಗೆ ಅನೇಕ ಎಡವಟ್ಟುಗಳು ಆಗಿವೆ. ಅದನ್ನು ಮುಂದಿನ ಪಂದ್ಯಗಳಲ್ಲಿ ಮಾಡುವುದಿಲ್ಲ. ಉತ್ತಮ ಪ್ರದರ್ಶನ ನೀಡಬೇಕಾಗಿದೆ ಎಂದು ಹೇಳಿದ್ದಾರೆ. ಸತತ ಮೂರು ಬಾರಿ ಧೋನಿ ತಂಡ ಸೋಲು ಅನುಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...