alex Certify ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ತಂದೆ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ತಂದೆ ನಿಧನ

 ಮೀರತ್: ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಅವರ ತಂದೆ ಕಿರಣ್ ಪಾಲ್ ಸಿಂಗ್ ನಿಧನರಾಗಿದ್ದಾರೆ. ಮೀರತ್ ನ ತಮ್ಮ ನಿವಾಸದಲ್ಲಿ ಗುರುವಾರ ಅವರು ಕೊನೆಯುಸಿರೆಳೆದಿದ್ದಾರೆ.

63 ವರ್ಷದ ಕಿರಣ್ ಪಾಲ್ ಸಿಂಗ್ ಅವರು ಕ್ಯಾನ್ಸರ್ ಪೀಡಿತರಾಗಿದ್ದು, ನೋಯ್ಡಾದಲ್ಲಿ ಕಿಮೊಥೆರಪಿಗೆ ಒಳಗಾಗಿದ್ದರು. ಯಕೃತ್ ಕಾಯಿಲೆಯಿಂದ ಬಳಲುತ್ತಿದ್ದರು. ಎರಡು ವಾರಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು.

ಉತ್ತರಪ್ರದೇಶದ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಅವರು ಕಾರ್ಯನಿರ್ವಹಿಸಿದ್ದರು. ಭುವನೇಶ್ವರ್ ಕುಮಾರ್ ಸೆಪ್ಟೆಂಬರ್ 2020ರಲ್ಲಿ ಯುಎಇನಲ್ಲಿ ಆಡುತ್ತಿದ್ದಾಗ ಕಿರಣ್ ಪಾಲ್ ಸಿಂಗ್ ಅವರಿಗೆ ಪಿತ್ತಜನಕಾಂಗ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು.

ಮೀರತ್ ನ ಗಂಗಾನಗರದ ಆಸ್ಪತ್ರೆಗೆ ದಾಖಲಿಸಿ ಡಿಸ್ಚಾರ್ಜ್ ಆಗಿ ಮನೆಗೆ ಬಂದ ಎರಡು ದಿನಗಳ ನಂತರ ಕಿರಣ್  ಪಾಲ್ ಸಿಂಗ್ ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ. ಪ್ರಸ್ತುತ ಮನೆಯಲ್ಲಿರುವ ಭುವನೇಶ್ವರ ಕುಮಾರ್ ಅವರನ್ನು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆ ಮಾಡಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...