alex Certify ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಮೆಟ್ರೋ, ಬಿಎಂಟಿಸಿ ಸೇವೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಮೆಟ್ರೋ, ಬಿಎಂಟಿಸಿ ಸೇವೆ ವಿಸ್ತರಣೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 19 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಟಿ20 ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ಬಿಎಂಟಿಸಿ ಸಂಚಾರ ಅವಧಿಯನ್ನು ವಿಸ್ತರಿಸಲಾಗಿದೆ.

ಬೈಯ್ಯಪ್ಪನಹಳ್ಳಿ, ನಾಗಸಂದ್ರ, ಕೆಂಗೇರಿ ಕಡೆಗಳಿಂದ ರಾತ್ರಿ ಒಂದು ಗಂಟೆಗೆ ಕೊನೆಯ ರೈಲುಗಳು ಹೊರಡಲಿದೆ. ಕೆಂಪೇಗೌಡ ನಿಲ್ದಾಣದಿಂದ ರಾತ್ರಿ 1.30 ಕ್ಕೆ ರೈಲು ಹೊರಡಲಿದೆ. ಪ್ರಯಾಣಿಕರ ದಟ್ಟಣೆ ತಪ್ಪಿಸಲು ಪೇಪರ್ ಟಿಕೆಟ್ ನೀಡಲಾಗುವುದು. ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ 50 ರೂ. ಪೇಪರ್ ಟಿಕೆಟ್ 3 ಗಂಟೆಯಿಂದ ಲಭ್ಯವಿರುತ್ತವೆ. ಪಂದ್ಯದ ನಂತರ ವಾಪಸ್ ಹೋಗಲು ಪೇಪರ್ ಟಿಕೆಟ್ ಗಳನ್ನು ಮಾತ್ರ ಬಳಸಲು ಅವಕಾಶ ಇದೆ.

ಟಿ20 ಪಂದ್ಯದ ಹಿನ್ನೆಲೆಯಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಿಂದ ಬೆಂಗಳೂರಿನ ವಿವಿಧ ಕಡೆಗಳಿಗೆ 3 ಗಂಟೆಯಿಂದ ಪಂದ್ಯ ಮುಗಿಯುವವರೆಗೆ ಹೆಚ್ಚುವರಿ ಬಸ್ ಸೇವೆ ಇರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...