alex Certify ಟಿ20 ವಿಶ್ವಕಪ್ ನಲ್ಲಿ ಸ್ಟಾರ್ ವೇಗಿ ಬೂಮ್ರಾ ಭಾಗಿ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ20 ವಿಶ್ವಕಪ್ ನಲ್ಲಿ ಸ್ಟಾರ್ ವೇಗಿ ಬೂಮ್ರಾ ಭಾಗಿ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಮಹತ್ವದ ಹೇಳಿಕೆ

ಗುವಾಹಟಿ: ಟಿ20 ವಿಶ್ವಕಪ್‌ ನಿಂದ ಬುಮ್ರಾ ಅಧಿಕೃತವಾಗಿ ಹೊರಗುಳಿದಿಲ್ಲ ಎಂದು ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಂತೆ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೂಡ ಗಾಯಗೊಂಡಿರುವ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮುಂಬರುವ ಐಸಿಸಿ ಪುರುಷರ ಟಿ20 ವಿಶ್ವಕಪ್  ರಲ್ಲಿ ಭಾಗವಹಿಸಲು ಆಸ್ಟ್ರೇಲಿಯಾಕ್ಕೆ ಹೋಗುವುದನ್ನು ಬಿಟ್ಟುಕೊಡಲು ಸಿದ್ಧರಿಲ್ಲ.

ಟಿ 20 ವಿಶ್ವಕಪ್ ಟೂರ್ನಿಯಲ್ಲಿ ಬೂಮ್ರಾ ಭಾಗಿಯಾಗುವ ಕುರಿತು ಮಾತನಾಡಿದ ದ್ರಾವಿಡ್, ಬೂಮ್ರಾ ಹೊರಗೂಳಿಯುವ ಬಗ್ಗೆ ಅಧಿಕೃತವಾಗಿ ಖಚಿತವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೂಮ್ರಾ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಅಕ್ಟೋಬರ್ 16 ರಿಂದ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಆಸ್ಟ್ರೇಲಿಯಾದಲ್ಲಿ ಟೂರ್ನಿ ನಡೆಯಲಿದ್ದು, ಬೂಮ್ರಾ ಹೊರಗೂಳಿಯುವ ಕುರಿತು ರಾಹುಲ್ ದ್ರಾವಿಡ್ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ವೈದ್ಯಕೀಯ ವರದಿಗಳಿಗೆ ಆಳವಾಗಿ ಹೋಗಿಲ್ಲ. ಅದು ತಜ್ಞರ ಮೇಲೆ ಅವಲಂಬಿತವಾಗಿದೆ. ಅವರನ್ನು ಮೌಲ್ಯಮಾಪನ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಬೂಮ್ರಾ ಹೊರಗಿಡಲ್ಪಟ್ಟಿದ್ದು, ಅವರು ಹೊರಗುಳಿದಿದ್ದಾರೆ ಎಂದು ನಾನು ಅಧಿಕೃತ ದೃಢೀಕರಣವನ್ನು ಪಡೆಯುವವರೆಗೆ ಅವರು ತಂಡಕ್ಕೆ ಸೇರುವರೆಂಬ ಭರವಸೆಯಿಂದ ಇರುತ್ತೇವೆ ಎಂದು ತಿಳಿಸಿದ್ದಾರೆ.

ಮೊಹಮ್ಮದ್ ಸಿರಾಜ್ ಗಾಯಗೊಂಡಿರುವ ಬೂಮ್ರಾ ಬದಲಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಉಳಿದ ಆಟಗಾರನಾಗಿ ನೇಮಕಗೊಂಡಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಬೆನ್ನುನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿರುವ ಹೂಡಾ ಮತ್ತು ಜಸ್ಪ್ರೀತ್ ಬುಮ್ರಾ ಅವರ ಆರೋಗ್ಯ ಚೇತರಿಕೆಗಾಗಿ ಕಾಯುತ್ತಿದ್ದು, ಹೂಡಾ ಅವರನ್ನು ದಕ್ಷಿಣ ಆಫ್ರಿಕಾ ಸರಣಿಗೆ ಅನರ್ಹರೆಂದು ಘೋಷಿಸಲಾಯಿತು. ಆದರೆ, ಬೂಮ್ರಾ ಅವರು ಬೆನ್ನಿನ ಗಾಯಕ್ಕೆ ಒಳಗಾದ ಕಾರಣ ಮೊದಲ T20I ನ ಹಿಂದಿನ ದಿನವಾದ ಬುಧವಾರದಂದು ಕೈಬಿಡಲಾಯಿತು.

ಕಳೆದ ಮೂರು ತಿಂಗಳ ಅವಧಿಯಲ್ಲಿ ಅವರು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಸ್ವದೇಶಿ ಸರಣಿಯ ಜೊತೆಗೆ ಐರ್ಲೆಂಡ್, ಇಂಗ್ಲೆಂಡ್, ಕೆರಿಬಿಯನ್ ಮತ್ತು ಯುಎಇಯಲ್ಲಿ T20I ಗಳನ್ನು ಆಡಿದ್ದಾರೆ.

ಭಾರತ ಟಿ20 ವಿಶ್ವಕಪ್ ತಂಡ: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್(ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್(ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್(ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ*, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...