alex Certify BIG NEWS: ಬೆಂಗಳೂರಲ್ಲಿ ಭಾರತ –ಶ್ರೀಲಂಕಾ ಪಂದ್ಯದ ವೇಳೆ ಭದ್ರತಾ ಲೋಪ, ಕೊಹ್ಲಿ ಬಳಿ ನುಗ್ಗಿ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಲ್ಲಿ ಭಾರತ –ಶ್ರೀಲಂಕಾ ಪಂದ್ಯದ ವೇಳೆ ಭದ್ರತಾ ಲೋಪ, ಕೊಹ್ಲಿ ಬಳಿ ನುಗ್ಗಿ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್

ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್‌ನ ಎರಡನೇ ದಿನದ ಅಂತ್ಯದ ವೇಳೆಗೆ ಸಣ್ಣ ಭದ್ರತಾ ಲೋಪದಿಂದ ನಾಲ್ವರು ಅಭಿಮಾನಿಗಳು ಆಟವಾಡುತ್ತಿದ್ದ ಮೈದಾನಕ್ಕೆ ನುಗ್ಗಿದ್ದಾರೆ. ಅವರಲ್ಲಿ ಒಬ್ಬರು ವಿರಾಟ್ ಕೊಹ್ಲಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಶ್ರೀಲಂಕಾದ ಎರಡನೇ ಇನ್ನಿಂಗ್ಸ್‌ನ ಆರನೇ ಓವರ್‌ನಲ್ಲಿ ಈ ಘಟನೆ ಸಂಭವಿಸಿದೆ. ಪಂದ್ಯದ ವೇಳೆ ವಿರಾಟ್ ಕೊಹ್ಲಿ ಬಳಿಗೆ ನಾಲ್ವರು ನುಗ್ಗಿದ ಆಘಾತಕಾರಿ ಘಟನೆ ನಿನ್ನೆ ರಾತ್ರಿ 10.15 ರ ಸುಮಾರಿಗೆ ನಡೆದಿದೆ. ಕಲಬುರ್ಗಿಯ ಒಬ್ಬ ಹಾಗೂ ಬೆಂಗಳೂರಿನ ಮೂವರು ದಿಢೀರನೆ ವಿರಾಟ್ ಕೊಹ್ಲಿ ಸಮೀಪಕ್ಕೆ ಓಡಿಹೋಗಿ ಸೆಲ್ಫಿಗೆ ಮುಗಿಬಿದ್ದಿದ್ದಾರೆ. ತಕ್ಷಣವೇ ಕಬ್ಬನ್ ಪಾರ್ಕ್ ತಾನೇ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದು, ಅತಿಕ್ರಮ ಪ್ರವೇಶ, ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ನಾಲ್ವರನ್ನು ಇಂದು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...