alex Certify BIG BREAKING: 302 ರನ್ ಗಳಿಂದ ಹೀನಾಯವಾಗಿ ಸೋತ ಶ್ರೀಲಂಕಾ: ಸೆಮಿಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡ ಭಾರತ ಅಜೇಯ ಓಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 302 ರನ್ ಗಳಿಂದ ಹೀನಾಯವಾಗಿ ಸೋತ ಶ್ರೀಲಂಕಾ: ಸೆಮಿಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡ ಭಾರತ ಅಜೇಯ ಓಟ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವ ಕಪ್ ಟೂರ್ನಿಯ ಪಂದ್ಯದಲ್ಲಿ ಶ್ರೀಲಂಕಾ ಹೀನಾಯ ಸೋಲು ಕಂಡಿದೆ. ಭಾರತ 302 ರನ್ ಗಳಿಂದ ಜಯಗಳಿಸಿದೆ. ಈ ಮೂಲಕ ಮತ್ತೊಂದು ಭರ್ಜರಿ ಗೆಲುವು ಸಾಧಿಸಿದ್ದು, ಪ್ರಸಕ್ತ ಟೂರ್ನಿಯಲ್ಲಿ ಅಜೇಯ ತಂಡವಾಗಿ ಮುಂದುವರೆದಿದೆ. ವಿಶ್ವಕಪ್ ಸೆಮಿಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿತು. ರೋಹಿತ್ ಶರ್ಮಾ 4, ಶುಭಮನ್ ಗಿಲ್ 92, ವಿರಾಟ್ ಕೊಹ್ಲಿ 88, ಶ್ರೇಯಸ್ ಅಯ್ಯರ್ 82, ಕೆ.ಎಲ್. ರಾಹುಲ್ 21, ಸೂರ್ಯಕುಮಾರ್ ಯಾದವ್ 12, ರವೀಂದ್ರ ಜಡೇಜ 35 ರನ್ ಗಳಿಸಿದರು. ಶ್ರೀಲಂಕಾ ಪರವಾಗಿ ದಿಲ್ಸನ್ ಮಧುಶಂಕ 5 ವಿಕೆಟ್ ಪಡೆದರು.

ಬೃಹತ್ ಗೆಲುವಿನ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡ ಹೀನಾಯ ಸೋಲು ಕಂಡಿದೆ. 19.4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 55 ರನ್ ಗಳಿಸಿತು.

ಲಂಕಾ ಪರವಾಗಿ ಏಂಜೆಲೋ ಮ್ಯಾಥ್ಯೂಸ್ 12, ಮಹೇಶ್ ತೀಕ್ಷ್ಣ 12, ಕಸುನ್ ರಜಿತ 14 ರನ್ ಗಳಿಸಿದರು. ಮೊಹಮ್ಮದ್ ಶಮಿ 5, ಮೊಹಮದ್ ಸಿರಾಜ್ 3 ವಿಕೆಟ್ ಪಡೆದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...