alex Certify ಕನ್ನಡಿಗ ಪ್ರಸಿದ್ಧ್ ಕೃಷ್ಣ ಮಾರಕ ದಾಳಿ: ವಿಂಡೀಸ್ ವಿರುದ್ಧ ಭರ್ಜರಿ ಗೆಲುವು, ಭಾರತಕ್ಕೆ ಸರಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗ ಪ್ರಸಿದ್ಧ್ ಕೃಷ್ಣ ಮಾರಕ ದಾಳಿ: ವಿಂಡೀಸ್ ವಿರುದ್ಧ ಭರ್ಜರಿ ಗೆಲುವು, ಭಾರತಕ್ಕೆ ಸರಣಿ

ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 44 ರನ್ ಗಳ ಗೆಲುವು ಕಂಡಿದೆ. ಮೂರು ಪಂದ್ಯಗಳ ಸರಣಿಯನ್ನು 2 -0 ಅಂತರದಿಂದ ಭಾರತ ವಶಪಡಿಸಿಕೊಂಡಿದೆ. ಪೂರ್ಣಾವಧಿ ನಾಯಕನಾದ ನಂತರ ರೋಹಿತ್ ಶರ್ಮಾ ಅವರಿಗೆ ಮೊದಲ ಸರಣಿ ಯಶಸ್ಸು ಸಿಕ್ಕಿದೆ.

ಅಮದಾಬಾದ್ ನರೇಂದ್ರಮೋದಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 9 ವಿಕೆಟ್ ಗೆ 237 ರನ್ ಗಳಿಸಿತ್ತು. ಕೆ.ಎಲ್. ರಾಹುಲ್ 49, ಸೂರ್ಯ ಕುಮಾರ್ ಯಾದವ್ 64, ವಾಷಿಂಗ್ಟನ್ ಸುಂದರ್ 24, ದೀಪಕ್ ಹೂಡಾ 29 ರನ್ ಗಳಿಸಿದರು. ವಿಂಡೀಸ್ ಪರವಾಗಿ ಎ. ಜೋಸೆಫ್ 2, ಸ್ಮಿತ್ 2 ವಿಕೆಟ್ ಪಡೆದರು.

238 ರನ್ ಗೆಲುವಿನ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ 46 ಓವರುಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 193 ರನ್ ಗಳಿಸಿ ಸೋಲು ಕಂಡಿದೆ. ಕನ್ನಡಿಗ ಪ್ರಸಿದ್ಧ್ ಕೃಷ್ಣ ಮಾರಕ ಬೌಲಿಂಗ್ ದಾಳಿ ನಡೆಸಿ ನಾಲ್ಕು ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪುರಸ್ಕೃತರಾದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...