alex Certify BIG NEWS: ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ರೆಡಿ, ಧೋನಿಗೆ ಸ್ಥಾನ ಕಲ್ಪಿಸಿದ ಬಿಸಿಸಿಐ –ಶಿಖರ್ ಧವನ್, ಪೃಥ್ವಿ ಔಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ರೆಡಿ, ಧೋನಿಗೆ ಸ್ಥಾನ ಕಲ್ಪಿಸಿದ ಬಿಸಿಸಿಐ –ಶಿಖರ್ ಧವನ್, ಪೃಥ್ವಿ ಔಟ್

ನವದೆಹಲಿ: ಟಿ20 ವಿಶ್ವಕಪ್ ಟೂರ್ನಿಗೆ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಮಾಜಿ ನಾಯಕ ಎಂ.ಎಸ್. ಧೋನಿ ಅವರನ್ನು ತಂಡದ ಮೆಂಟರ್ ಆಗಿ ನೇಮಿಸಲಾಗಿದೆ.

ಪೃಥ್ವಿ ಶಾ, ಶಿಖರ್ ಧವನ್, ಟಿ. ನಟರಾಜನ್ ಮತ್ತು ಯುಜ್ವೇಂದ್ರ ಚಾಹಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕದಿಂದ ಕೆ.ಎಲ್. ರಾಹುಲ್ ಒಬ್ಬರೇ ಸ್ಥಾನ ಪಡೆದಿದ್ದಾರೆ. ಸ್ಟಾರ್ ಸ್ಪಿನ್ನರ್‌ಗಳಾದ ವರುಣ್ ಚಕ್ರವರ್ತಿ, ರಾಹುಲ್ ಚಹರ್, ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆ ಮಾಡಲಾಗಿದೆ.

ಅಕ್ಟೋಬರ್ 17 ರಿಂದ ಒಮಾನ್ ಮತ್ತು ಯುಎಇನಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಅ. 24 ರಂದು ಭಾರತ, ಪಾಕಿಸ್ತಾನ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಟೂರ್ನಿಯ ಅಂತಿಮ ಪಂದ್ಯ ನವೆಂಬರ್ 14 ರಂದು ನಡೆಯಲಿದೆ.

ತಂಡ ಇಂತಿದೆ:

ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪ ನಾಯಕ), ಕೆ.ಎಲ್. ರಾಹುಲ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ಆರ್. ಅಶ್ವಿನ್, ಅಕ್ಷರ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅವರನ್ನು ಆಯ್ಕೆ ಮಾಡಲಾಗಿದ್ದು, ಶ್ರೇಯಸ್ ಅಯ್ಯರ್, ಶಾರ್ದುಲ್ ಠಾಕೂರ್, ದೀಪಕ್ ಚಹರ್ ಮೀಸಲು ಆಟಗಾರರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...