alex Certify BIG NEWS: ಸಿಡ್ನಿ ಮೈದಾನದಲ್ಲಿ ಭಾರತೀಯ ಆಟಗಾರರಿಗೆ ಜನಾಂಗೀಯ ನಿಂದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಡ್ನಿ ಮೈದಾನದಲ್ಲಿ ಭಾರತೀಯ ಆಟಗಾರರಿಗೆ ಜನಾಂಗೀಯ ನಿಂದನೆ

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಸಿಡ್ನಿಯಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ಜನಾಂಗೀಯ ನಿಂದನೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಆಸ್ಟ್ರೇಲಿಯಾ ತಂಡದ ಅಭಿಮಾನಿಗಳು ಟೀಂ ಇಂಡಿಯಾ ಆಟಗಾರರನ್ನು ನಿಂದಿಸಿದ್ದಾರೆ. ಬೌಲರ್ ಗಳಾದ ಮೊಹ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಆಸ್ಟ್ರೇಲಿಯಾ ಅಭಿಮಾನಿಗಳು ನಿಂದಿಸಿದ್ದು, ಈ ಕುರಿತಾಗಿ ಬಿಸಿಸಿಐ ನಿಂದ ಐಸಿಸಿಗೆ ದೂರು ನೀಡಲಾಗಿದೆ.

ಆಸ್ಟ್ರೇಲಿಯಾ ಕ್ರಿಕೆಟ್ ಮುಖ್ಯಸ್ಥರಿಗೆ ಕೂಡ ದೂರು ನೀಡಲಾಗಿದೆ. ಮೂರನೇ ದಿನದಾಟದ ಪಂದ್ಯದ ವೇಳೆ ಘಟನೆ ನಡೆದಿದ್ದು, ದಿನದ ಆಟ ಪೂರ್ಣಗೊಳಿಸಿದ ನಂತರ ರೆಫರೀ ಡೇವಿಡ್ ಬೂನ್ ಅವರು ಟೀಂ ಇಂಡಿಯಾ ಆಟಗಾರರೊಂದಿಗೆ ಚರ್ಚೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...