alex Certify ಕೆಲಸ ಸಿಗದೇ ಯುವ ಬಾಕ್ಸಿಂಗ್ ಪಟು ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸ ಸಿಗದೇ ಯುವ ಬಾಕ್ಸಿಂಗ್ ಪಟು ಆತ್ಮಹತ್ಯೆ

ಉಡುಪಿ: ಸರಿಯಾದ ಕೆಲಸ ಸಿಗದ ಚಿಂತೆಯಲ್ಲಿ ರಾಷ್ಟ್ರಮಟ್ಟದ ಯುವ ಬಾಕ್ಸಿಂಗ್ ಪಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಲ್ಪೆ ಪಡುಕರೆಯ ಶಾಂತಿನಗರದಲ್ಲಿ ಮಂಗಳವಾರ ಬೆಳಗ್ಗೆ ಘಟನೆ ನಡೆದಿದೆ. ವೀರಜ್ ಮೆಂಡನ್(29) ಮೃತಪಟ್ಟವರು. ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಆಗಿದ್ದ ಅವರು ಸರಿಯಾದ ಕೆಲಸ ಸಿಗದೇ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು.

ಕ್ರೀಡಾಕೂಟದಡಿ ಕೆಲಸ ಸಿಗುವ ಭರವಸೆ ಹೊಂದಿದ್ದ ಅವರು ಸರಿಯಾದ ಕೆಲಸ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದರು. ಇದರಿಂದ ಮನನೊಂದು ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...