alex Certify ರೈತರ ಪ್ರತಿಭಟನೆಗೆ ಕೈಜೋಡಿಸಿದ ಒಲಂಪಿಕ್ ಪದಕ ವಿಜೇತ ಬಾಕ್ಸರ್​​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಪ್ರತಿಭಟನೆಗೆ ಕೈಜೋಡಿಸಿದ ಒಲಂಪಿಕ್ ಪದಕ ವಿಜೇತ ಬಾಕ್ಸರ್​​

ಕೃಷಿ ಮಸೂದೆ ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸುತ್ತಲೇ ಬಂದಿರುವ ಒಲಿಂಪಿಯನ್​ ಬಾಕ್ಸರ್​​ ವಿಜಯೇಂದರ್​ ಸಿಂಗ್​ ಶುಕ್ರವಾರ ರೈತರ ಪ್ರತಿಭಟನಾ ಸ್ಥಳದಲ್ಲಿ ಕಾಣಿಸಿಕೊಂಡಿದ್ದಾರೆ.

ದೆಹಲಿಯ ಟಿಕ್ರಿ ಗಡಿಯಲ್ಲಿ ಪ್ರತಿಭಟನಾ ನಿರತರಿಗಾಗಿ ಜಮೀಂದರಾ ವಿದ್ಯಾರ್ಥಿ ಸಂಘಟನೆ ಊಟದ ವ್ಯವಸ್ಥೆ ಮಾಡಿತ್ತು. ಸ್ಥಳಕ್ಕೆ ಆಗಮಿಸಿದ ವಿಜಯೇಂದರ್​ ಸಿಂಗ್​ ಸ್ವಯಂ ಪ್ರೇರಿತರಾಗಿ ರೈತರಿಗೆ ಆಹಾರ ಬಡಿಸಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿದ ಒಲಿಂಪಿಯನ್​ ಬಾಕ್ಸರ್​ ವಿಜಯೇಂದರ್​ ಸಿಂಗ್, ನಮ್ಮ ದೇಶದ ರೈತರ ಸೇವೆ ಮಾಡಲು ನಾನು ಇಲ್ಲಿಗೆ ಬಂದಿದ್ದೇನೆ. ನಮ್ಮ ಹೋರಾಟ ಕೇಂದ್ರ ಸರ್ಕಾರದ ವಿರುದ್ಧವಲ್ಲ. ಆದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ತಪ್ಪು ಕಾನೂನುಗಳ ವಿರುದ್ಧ ಎಂದು ಹೇಳಿದರು.

— ANI (@ANI) December 18, 2020

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...