alex Certify ತಂಡಕ್ಕೆ ಮರಳಿದ ರಾಹುಲ್, ಸರಣಿ ಜಯಿಸುವ ತವಕದಲ್ಲಿ ಟೀಂ ಇಂಡಿಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಂಡಕ್ಕೆ ಮರಳಿದ ರಾಹುಲ್, ಸರಣಿ ಜಯಿಸುವ ತವಕದಲ್ಲಿ ಟೀಂ ಇಂಡಿಯಾ

ಅಹಮದಾಬಾದ್: ಉಪನಾಯಕ ಕೆ.ಎಲ್. ರಾಹುಲ್ ತಂಡಕ್ಕೆ ಮರಳಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾ ಮತ್ತಷ್ಟು ಹುಮ್ಮಸ್ಸಿನಲ್ಲಿದ್ದು, ಎರಡನೇ ಪಂದ್ಯವನ್ನು ಜಯಿಸಲು ಸಜ್ಜಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಜಯಿಸಿದ್ದ ಟೀಂ ಇಂಡಿಯಾ ಇಂದು ನಡೆಯಲಿರುವ ಎರಡನೇ ಪಂದ್ಯವನ್ನು ಜಯಿಸಿ ಸರಣಿ ಕೈವಶ ಮಾಡಿಕೊಳ್ಳಲು ಸಜ್ಜಾಗಿದೆ.

ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ 6 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದ ಟೀಂ ಇಂಡಿಯಾ ಎರಡನೇ ಪಂದ್ಯವನ್ನು ಜಯಿಸುವ ಉತ್ಸಾಹದಲ್ಲಿದೆ. ಕೆ.ಎಲ್. ರಾಹುಲ್ ತಂಡಕ್ಕೆ ಮರಳಿರುವುದರಿಂದ ಬ್ಯಾಟಿಂಗ್ ಬಲ ಮತ್ತಷ್ಟು ಹೆಚ್ಚಾಗಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು 134 ಸಲ ಮುಖಾಮುಖಿಯಾಗಿದ್ದು, ಭಾರತ 65 ಮತ್ತು ವೆಸ್ಟ್ ಇಂಡೀಸ್ 63 ಪಂದ್ಯಗಳಲ್ಲಿ ಜಯ ಗಳಿಸಿವೆ. ಎರಡು ಪಂದ್ಯಗಳು ಟೈ ಆಗಿದ್ದು, ಎರಡು ಪಂದ್ಯಗಳ ಫಲಿತಾಂಶ ಬಂದಿಲ್ಲ. ಇಂದು ಮಧ್ಯಾಹ್ನ 1.30 ಕ್ಕೆ ಅಹಮದಾಬಾದ್ ನ ನರೇಂದ್ರಮೋದಿ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...