alex Certify ಪಂದ್ಯ ಮುಗಿದ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದ ದ್ರಾವಿಡ್: ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ಸಿಬ್ಬಂದಿಗೆ ಕೊಡುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂದ್ಯ ಮುಗಿದ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದ ದ್ರಾವಿಡ್: ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ಸಿಬ್ಬಂದಿಗೆ ಕೊಡುಗೆ

ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ನಂತರ ಭಾರತದ ನೂತನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತೊಮ್ಮೆ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಶಿವಕುಮಾರ್ ನೇತೃತ್ವದ ಕ್ರೀಡಾಂಗಣದ ಸಿಬ್ಬಂದಿಗೆ ದ್ರಾವಿಡ್ 35,000 ರೂ. ದೇಣಿಗೆ ನೀಡಿದ್ದಾರೆ.

ದ್ರಾವಿಡ್ ಪಿಚ್‌ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ತೆರೆಮರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಬಹುಮಾನ ನೀಡಲು ನಿರ್ಧರಿಸಿದರು. ಎರಡು ಪಂದ್ಯಗಳ ಸರಣಿಯ ಮೊದ ಪಂದ್ಯ ಡ್ರಾ ಆಗಿದೆ. ಪಿಚ್ ಟೆಸ್ಟ್ ಕ್ರಿಕೆಟ್‌ಗೆ ಪರಿಪೂರ್ಣವಾಗಿ ರೂಪಿಸಲಾಗಿದೆ ಎಂದು ಹೇಳಲಾಗಿದೆ.

ನಾವು ಅಧಿಕೃತ ಘೋಷಣೆ ಮಾಡಲು ಬಯಸುತ್ತೇವೆ. ರಾಹುಲ್ ದ್ರಾವಿಡ್ ಅವರು ನಮ್ಮ ಮೈದಾನದ ಆಟಗಾರರಿಗೆ ವೈಯಕ್ತಿಕವಾಗಿ 35,000 ರೂ. ನೀಡಿದ್ದಾರೆ ಎಂದು ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​(UPCA) ಪಂದ್ಯ ಮುಗಿದ ನಂತರ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...