BIG NEWS: ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಭಯಗೊಂಡು ನಾಪತ್ತೆಯಾದ ವಿದ್ಯಾರ್ಥಿ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿರುವ ಸುದ್ದಿ ತಿಳಿಯುತ್ತಿದ್ದಂತೆ ಭಯಗೊಂಡ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನಡೆದಿದೆ.

ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್ ಗೌಡ (16) ನಾಪತ್ತೆಯಾಗಿರುವ ವಿದ್ಯಾರ್ಥಿ. ಸುರೇಶ್ ಹಾಗೂ ರೂಪಾ ದಂಪತಿಯ ಮಗ ಚಂದನ್ ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಆತಂಕಗೊಂಡು ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಲ್ಲಿ ನಾಪತ್ತೆಯಾಗಿದ್ದಾನೆ. ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದಾನೆ. ಪೋಷಕರು ಮಗನಿಗಾಗಿ ಹುಡುಕಾಟ ನಡೆಸಿದ್ದು, ನೆಲಮಂಗಲ ಠಾಣೆಯಲ್ಲಿ ಪ್ರಕರ‍ಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read