‘IT’ ದಾಳಿ ವೇಳೆ ಸಿಕ್ಕಿರುವ ಹಣ SST ಟ್ಯಾಕ್ಸ್ ಗೆ ಸೇರಿದ್ದು: ಮಾಜಿ ಸಿಎಂ HDK ಹೊಸ ಬಾಂಬ್

ಮೈಸೂರು : ಅಂಬಿಕಾ ಪತಿ ನಿವಾಸದಲ್ಲಿ ಸಿಕ್ಕಿದ್ದು SST ಟ್ಯಾಕ್ಸ್, ಸಂತೋಷ್ ಮನೆಯಲ್ಲಿ ಸಿಕ್ಕಿದ್ದು YST ಕಲೆಕ್ಷನ್ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ .

ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿದರು . ರಾಜ್ಯದಲ್ಲಿ ವೈಎಸ್ಟಿ ಬಳಿಕ ಈಗ ಎಸ್ಎಸ್ಟಿ ಟ್ಯಾಕ್ಸ್ ಕಲೆಕ್ಷನ್ ಆರಂಭವಾಗಿದೆ. ಐಟಿ ದಾಳಿಯಲ್ಲಿ ಸಿಕ್ಕ ಹಣ ಎಸ್ಎಸ್ಟಿ ಟ್ಯಾಕ್ಸ್ ಗೆ ಸೇರಿದ್ದು ಎಂದು ಆರೋಪ ಮಾಡಿದರು.

ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸರಿಯಾದ ತನಿಖೆ ಮಾಡಬೇಕು, ರಾಜ್ಯದಲ್ಲಿ ಭ್ರಷ್ಟಾಚಾರ ಮಾಡಲು ಇಲಾಖೆಗಳು ಪೈಪೋಟಿಗೆ ಬಿದ್ದಿವೆ. ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ಇದೆ, ಹಣ ಸಿಕ್ಕಿರುವುದಕ್ಕಿಂತ ಸಾಕ್ಷಿ ಬೇಕಾ..? ಇದಲ್ಲದೇ ಇನ್ನಷ್ಟು ಲೂಟಿ ಹೊರಗೆ ಬರಬೇಕಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read