ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದು ಕೋರಿ ಡಿಎನ್ ಎ ಕಂಪನಿ ಹೈಕೋರ್ಟ್ ಮೊರೆ ಹೋಗಿದೆ.
ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರ್ ಸಿಬಿ, ಕೆ.ಎಸ್.ಸಿ.ಎ ಹಾಗೂ ಡಿಎನ್ ಎ ಕಂಪನಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೆ.ಎಸ್.ಸಿ.ಎ ಹೈಕೋರ್ಟ್ ಮೊರೆ ಹೋಗಿದೆ. ಇದೀಗ ಡಿಎನ್ ಎ ಕಂಪನಿ ಕೂಡ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ತನ್ನ ವಿರುದ್ಧದ ಎಫ್ ಐ ಆರ್ ರದ್ದು ಮಾಡುವಂತೆ ಮನವಿ ಸಲ್ಲಿಸಿದೆ.
ಇಂದು ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಆರ್ ಸಿಬಿ ವಿಜಯೋತ್ಸವದ ವೇಳೆ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದಾರು. ಹಲವರು ಗಾಯಗೊಂಡಿದ್ದರು.