BREAKING: ಹರಿದ್ವಾರದ ಮಾನಸಾದೇವಿ ಮಂದಿರದಲ್ಲಿ ಭೀಕರ ಕಾಲ್ತುಳಿತ: 7 ಜನರು ಸಾವು

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಹರಿದ್ವಾರದ ಮಾನಸಾದೇವಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 7 ಜನರು ಮೃತಪಟ್ಟಿದ್ದಾರೆ.

ಮನಸಾದೇವಿ ದೇವಸ್ಥಾನಕ್ಕೆ ಇಂದು ಮುಂಜಾನೆ ಅಪಾರ ಪ್ರಮಾಣದಲ್ಲಿ ಭಕ್ತರು ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳದಲ್ಲಿ ಪೊಲೀಸರು, ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಗರ್ವಾಲ್ ಡಿವಿಷನ್ ಕಮಿಷನರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read