ರಾಜ್ಯದಲ್ಲಿಂದು 22 ಜನರಿಗೆ ಕೊರೋನಾ ಸೋಂಕು ದೃಢ, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು ಇದೆ. ಬೆಂಗಳೂರಿನಲ್ಲಿ ಇಂದು 359 ಜನರಿಗೆ ಟೆಸ್ಟ್ ಮಾಡಲಾಗಿತ್ತು. ಬೆಂಗಳೂರು ನಗರದಲ್ಲಿ 19 ಜನರಿಗೆ ಕೋರೊನಾ ಸೋಂಕು ತಗುಲಿದೆ.

ಕೊರೋನಾ ಸೋಂಕು ತಗುಲಿದ್ದ 44 ವರ್ಷದ ವ್ಯಕ್ತಿ, 76 ವರ್ಷದ ವೃದ್ಧ ಎಂದು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 19, ಬಳ್ಳಾರಿ 2, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಇಂದು ಕೊರೋನಾ ಸೋಂಕು ತಗುಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read