ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ಸಿಎಂ ಗುಡ್ ನ್ಯೂಸ್ : ಜನವರಿಯಲ್ಲಿ ‘ಯುವನಿಧಿ’ ಜಾರಿ

ಬೆಂಗಳೂರು : ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನ ಜನವರಿಯಲ್ಲಿ ‘ಯುವನಿಧಿ’ ಜಾರಿಗೊಳಿಸುವುದಾಗಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83ಕ್ಕೆ ಆದೇಶ ಹೊರಡಿಸಿ, ಜಾರಿಗೊಳಿಸಲಾಗುತ್ತಿದೆ. 4 ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಯಾಗಿವೆ, ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ಆಡಳಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸೀಮಿತವಾಗದೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ಕೊಟ್ಟು ಕರ್ನಾಟಕ ಅಭಿವೃದ್ಧಿ ಮಾದರಿ ಆಡಳಿತವೆಂಬ ನವ ಕಲ್ಪನೆಗೆ ನಾಂದಿಯಾಗಿದ್ದೇವೆ. ನಮ್ಮ ಸಾಧನೆಗಳು ಸದನದ ಒಳಗೆ ಮತ್ತು ಹೊರಗೆ ಹಾಳೆಗಳಿಗೆ ಸೀಮಿತವಾಗಿರದೆ ಜನರ ಬದುಕಲ್ಲಿ ಪ್ರತಿಫಲಿಸುತ್ತಿವೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read