ಗುಂಡಿಕ್ಕಿ ಕೊಲ್ಲುವ ಹೇಳಿಕೆ: ಈಶ್ವರಪ್ಪ ವಿರುದ್ಧ ಎಫ್ಐಆರ್

ದಾವಣಗೆರೆ: ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಸಂಸದ ಡಿ.ಕೆ. ಸುರೇಶ್, ಶಾಸಕ ವಿನಯ್ ಕುಲಕರ್ಣಿ ಅವರ ರೀತಿ ದೇಶದ್ರೋಹದ ಹೇಳಿಕೆ ನೀಡಿದವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕೆಂದು ಪ್ರಧಾನಿಯವರಿಗೆ ಒತ್ತಾಯಿಸುತ್ತೇನೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದರು.

ಕಾಂಗ್ರೆಸ್ ಮುಖಂಡ ಹನುಮಂತಪ್ಪ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ದಾವಣಗೆರೆ ನಗರದ ನಿಜಲಿಂಗಪ್ಪ ಬಡಾವಣೆ ನಿವಾಸಿ ಹನುಮಂತಪ್ಪ ಅವರ ದೂರಿನ ಮೇರೆಗೆ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿಕೆ ಬಗ್ಗೆ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read