BREAKING : ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣ : 60 ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 60 ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಕಲ್ಲು ತೂರಾಟ ಪ್ರಕರಣದಲ್ಲಿ 60 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಶಿವಮೊಗ್ಗದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದು, ಎಲ್ಲಾ ಕಡೆ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಘಟನೆ ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರದಲ್ಲಿ ನಡೆದಿದೆ. 2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 12 ಮಂದಿ ಗಾಯಗೊಂಡಿದ್ದಾರೆ.ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದ್ದು, ಟಿಪ್ಪುವಿನ ಕಟೌಟ್ನ ಕೆಳಭಾಗದಲ್ಲಿ ಆಕ್ಷೇಪಾರ್ಹ ಸಂಗತಿ ಇದ್ದ ಹಿನ್ನಲೆಯಲ್ಲಿ ಪೊಲೀಸರು ಬಿಳಿ ಬಣ್ಣವನ್ನು ಬಳಿದಿದ್ದರು. ಇದಾದ ಬಳಿಕ ಗಲಭೆ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read