ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಮಾರಣಹೋಮ ನಡೆದಿದೆ. ರಾತ್ರೋ ರಾತ್ರಿ ಬೀದಿಯಲ್ಲಿ ಒದ್ದಾಡಿ ರಕ್ತವಾಂತಿ ಮಾಡಿ ನಾಯಿಗಳು ಸಾವನ್ನಪ್ಪಿರುವ ಘಟನೆ ಕೆ.ಆರ್ ಪುರಂನ ಭಟ್ಟರಹಳ್ಳಿಯಲ್ಲಿ ನಡೆದಿದೆ.
ರಸ್ತೆಯಲ್ಲಿಯೇ ಬೀದಿನಾಯಿಗಳು ನರಳಿ ನರಳಿ ಪ್ರಾಣಬಿಟ್ಟಿವೆ. ರಕ್ತವಾಂತಿ ಮಾಡುತ್ತ ತೀವ್ರ ಅಸ್ವಸ್ಥಗೊಂಡಿದ್ದ 6 ಬೀದಿನಾಯಿಗಳಲ್ಲಿ 5 ಬೀದಿನಾಯಿಗಳು ರಸ್ತೆಯಲ್ಲಿಯೇ ಒದ್ದಾಡಿ ಸಾವನ್ನಪ್ಪಿವೆ. ಒಂದು ನಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೀದಿನಾಯಿಗಳು ಸಾವನ್ನಪ್ಪುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.
ಬೀದಿನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಬಿಬಿಎಂಪಿ ಅಧಿಕಾರಿಗಳ ದೂರಿನ ಮೇರೆಗೆ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.