ಬಸ್ ಇಳಿಯುವಾಗ ಕಾಲುಜಾರಿ ಬಿದ್ದು ವಿದ್ಯಾರ್ಥಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಬಸ್ ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.

ಆದಿತ್ಯ(15) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಶಿಕಾರಿಪುರದ ಮೈತ್ರಿ ಶಾಲೆಯಲ್ಲಿ ಓದುತ್ತಿದ್ದ ಆದಿತ್ಯ ಭಾನುವಾರ ಶಿಕಾರಿಪುರಕ್ಕೆ ಬಂದಿದ್ದು, ಸಂಜೆ ಊರಿಗೆ ಮರಳುವಾಗ ಘಟನೆ ನಡೆದಿದೆ. ಬಸ್ ನಿಲ್ದಾಣ ಬರುತ್ತಿದ್ದಂತೆ ಆದಿತ್ಯ ಬಾಗಿಲ ಬಳಿ ಬಂದಿದ್ದಾರೆ. ಈ ವೇಳೆ ಬಸ್ ನಲ್ಲಿದ್ದ ಶುಂಠಿ ಚೀಲಕ್ಕೆ ಎಡವಿ ಚಲಿಸುತ್ತಿದ್ದ ಬಸ್ ನಿಂದ ಕೆಳಗೆ ಬಿದ್ದು, ಸಾವನ್ನಪ್ಪಿದ್ದಾರೆ.

ವಿಠಲ ನಗರ ಗ್ರಾಮದ ಅಜ್ಜ ನಾಗಪ್ಪನವರ ಮನೆಯಲ್ಲಿದ್ದ ಆದಿತ್ಯ ಶಿಕಾರಿಪುರ ಶಾಲೆಗೆ ಹೋಗುತ್ತಿದ್ದ. ತಂದೆ, ತಾಯಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಆದಿತ್ಯ ಸಾವಿಗೆ ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು ಸಂತಾಪ ಸೂಚಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read