ಸಿಡಿಲು ಬಡಿದು ವಿದ್ಯಾರ್ಥಿ ಸಾವು

ಉಡುಪಿ: ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಬಳಿ ನಡೆದಿದೆ. ಶಿರ್ವ ಮಾಣಿಬೆಟ್ಟು ತೋಟದ ಮನೆ ನಿವಾಸಿ ರಮೇಶ ಪೂಜಾರಿ ಅವರ ಪುತ್ರ ರಕ್ಷಿತ್ ಪೂಜಾರಿ(20) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ.

ಶಿರ್ವದ ಎಂಎಸ್ಆರ್ಎಸ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ಓದುತ್ತಿದ್ದಾರೆ. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆ ಸಮೀಪ ನಿಂತಿದ್ದ ವೇಳೆ ಸಿಡಿಲು ಬಡಿದು ಆಘಾತಕ್ಕೊಳಗಾಗಿದ್ದಾರೆ. ಕುಸಿದು ಬಿದ್ದಿದ್ದ ಅವರನ್ನು ಮನೆಯವರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read