ಹಾಸ್ಟೆಲ್ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಹಾಸ್ಟೆಲ್ ಕೊಠಡಿಯಲ್ಲಿ ಪಿ.ಹೆಚ್.ಡಿ. ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಮೂಲದ ರಂಗನಾಥ್ ನಾಯಕ(27) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬುಧವಾರ ಬೆಳಿಗ್ಗೆ ಕ್ಯಾಂಟೀನ್ ಗೆ ತೆರಳಿ ತಿಂಡಿ ಮುಗಿಸಿ ಹಾಸ್ಟೆಲ್ ಗೆ ಬಂದಿದ್ದ ರಂಗನಾಥ್ ಕೊಠಡಿ ಬಾಗಿಲು ಹಾಕಿಕೊಂಡಿದ್ದರು.

ಮಧ್ಯಾಹ್ನ ಸ್ನೇಹಿತ ರೂಮ್ ಬಳಿ ಹೋದಾಗ ಒಳಗಿನಿಂದ ಚಿಲಕ ಹಾಕಿರುವುದು ಕಂಡು ಬಂದಿದೆ. ಅನೇಕ ಸಲ ಬಾಗಿಲು ತಟ್ಟಿದರೂ ತೆರೆದಿಲ್ಲ. ಇದರಿಂದ ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ರಂಗನಾಥ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read