ಶಿವಮೊಗ್ಗ: ತಂದೆಯ ಸಾವಿನ ನೋವಿನಲ್ಲಿಯೂ ವಿದ್ಯಾರ್ಥಿನಿ ಪರೀಕ್ಷೆ ಬರೆದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದಿದೆ.
ಸಾಗರದ ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯ ತಂದೆ ನಿಧನರಾಗಿದ್ದು, ತಂದೆಯ ಸಾವಿನ ನೋವಿನ ನಡುವೆಯೂ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾರೆ. ಸಾಗರದ ಸುಭಾಷ್ ನಗರ ಬಡಾವಣೆಯ ಲಾಂಡ್ರಿ ಮಾಲೀಕ ಮಧುಸೂದನ್(56) ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಮರುದಿನ ಅವರ ಪುತ್ರಿ ಮೌಲ್ಯಾ ಅವರ ದ್ವಿತೀಯ ಬಿಕಾಂ 4ನೇ ಸೆಮಿಸ್ಟರ್ ಪರೀಕ್ಷೆ ಇತ್ತು. ಕುಟುಂಬದವರ ಸಹಕಾರದಿಂದ ಮೌಲ್ಯಾ ಪರೀಕ್ಷೆ ಬರೆದ ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.