ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ʼಓದುವ ಹವ್ಯಾಸ ಜ್ಞಾನದ ವಿಕಾಸʼ ಯೋಜನೆಯಡಿ ಶಾಲೆಗಳಲ್ಲಿ ಗ್ರಂಥಾಲಯ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲುʼಓದುವ ಹವ್ಯಾಸ ಜ್ಞಾನದ ವಿಕಾಸʼ ಯೋಜನೆಯಡಿ ಶಾಲೆಗಳಲ್ಲಿ ಗ್ರಂಥಾಲಯ ಹೊಂದಬೇಕೆಂದು ತಿಳಿಸಲಾಗಿದೆ.

ರಾಜ್ಯದ ಎಲ್ಲ ಶಾಲೆಗಳೂ ಮಕ್ಕಳ ಸ್ನೇಹಿ ಗ್ರಂಥಾಲಯ ಹೊಂದಬೇಕು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರದಲ್ಲಿ ಒಂದು ಅವಧಿ ಗ್ರಂಥಾಲಯಕ್ಕೆ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಪ್ರಸಿದ್ಧ ಲೇಖಕರ ಕಥೆ, ಕವಿತೆ, ನಾಟಕ, ಕಾದಂಬರಿ ಮತ್ತಿತರ ಸಾಹಿತ್ಯ ಕೃತಿಗಳು, ಜಾನಪದ, ಲೇಖನಗಳನ್ನು ಒಳಗೊಂಡ ಪುಸ್ತಕಗಳನ್ನು ಸಂಗ್ರಹಿಸಬೇಕು. ಸಮಗ್ರ ಶಿಕ್ಷಣ ಕರ್ನಾಟಕದ ನೆರವು ಹಾಗೂ ದಾನಿಗಳಿಂದ ಪುಸ್ತಕಗಳನ್ನು ಪಡೆಯಬೇಕು. ಅಂತಹ ಪುಸ್ತಕ ಓದುವ ಹವ್ಯಾಸವನ್ನು ಮಕ್ಕಳಲ್ಲಿ ರೂಢಿಸಬೇಕು. ಅದಕ್ಕಾಗಿಯೇ ಸರ್ಕಾರ ʼಓದುವ ಹವ್ಯಾಸ ಜ್ಞಾನದ ವಿಕಾಸʼ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read