ಮತ್ತಷ್ಟು ರಂಗೇರಿದ ಚುನಾವಣೆ: ಇಂದು ಬಿಜೆಪಿ ಪರ ಸುದೀಪ್ ಪ್ರಚಾರ

ಬೆಂಗಳೂರು: ಘಟಾನುಘಟಿ ನಾಯಕರ ನಾಮಪತ್ರ ಸಲ್ಲಿಕೆಯೊಂದಿಗೆ ಚುನಾವಣಾ ಆಖಾಡ ರಂಗೇರಿದ್ದು, ಪ್ರಚಾರದ ಭರಾಟೆ ಜೋರಾಗಿದೆ.

ಮತದಾನಕ್ಕೆ 22 ದಿನಗಳಷ್ಟೇ ಬಾಕಿ ಉಳಿದಿರುವುದರಿಂದ ಪ್ರಚಾರ ಕಾರ್ಯ ಜೋರಾಗಿದೆ. ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್ ಇಂದು ಪ್ರಚಾರ ನಡೆಸಲಿದ್ದಾರೆ. ಇಂದು ಮುಧೋಳ ಮತ್ತು ಬೀಳಗಿಯಲ್ಲಿ ಸುದೀಪ್ ರೋಡ್ ಶೋ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಟ್ಟ ಮಾತಿನಂತೆ ಇಂದು ಅಖಾಡಕ್ಕೆ ಇಳಿಯಲಿದ್ದಾರೆ.

ಮುಖ್ಯಮಂತ್ರಿಗಳೊಂದಿಗೆ ಸುದೀಪ್ ರೋಡ್ ಶೋ ನಡೆಸಲಿದ್ದಾರೆ. ಮುಧೋಳದಲ್ಲಿ ಸಚಿವ ಗೋವಿಂದ ಕಾರಜೋಳ, ಬೀಳಗಿಯಲ್ಲಿ ಸಚಿವ ಮುರುಗೇಶ್ ನಿರಾಣಿ ಇಂದು ನಾಮಪತ್ರ ಸಲ್ಲಿಸಲಿದ್ದು, ಇವರಿಬ್ಬರ ಪರವಾಗಿ ಸುದೀಪ್ ಬೃಹತ್ ಶೋ ನಡೆಸಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read