ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಸಕ್ಕರೆ ಕಾರ್ಖಾನೆ: ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆ ಘೋಷಣೆ

ಬೆಳಗಾವಿ: ಕಬ್ಬು ಬೆಳೆಯುವ ರೈತರಿಗೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಸಿಹಿ ಸುದ್ದಿ ನೀಡಿದೆ. ಪ್ರತಿ ಟನ್ ಕಬ್ಬಿಗೆ 3350 ರೂಪಾಯಿ ದರ ನೀಡುವುದಾಗಿ ಘೋಷಿಸಿದೆ.

ಸರ್ಕಾರ ನಿಗದಿಪಡಿಸಿದ ದರಕ್ಕಿಂತ ರೂ.50 ಜಾಸ್ತಿ ಹಣ ಕೊಡುವುದಾಗಿ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ತಿಳಿಸಿದೆ. ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರೂ. ಬೆಲೆ ನಿಗದಿಪಡಿಸಿದೆ. ಇದರಲ್ಲಿ 3250 ರೂ.ಗಳನ್ನು ಸಕ್ಕರೆ ಕಾರ್ಖಾನೆಗಳು ನೀಡಲಿದ್ದು, 50 ರೂಪಾಯಿ ಸರ್ಕಾರದಿಂದ ಸಬ್ಸಿಡಿಯಾಗಿ ನೀಡಲಾಗುವುದು.

ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ ಸ್ವರೂಪ ಮಹದೇವರಾವ್ ಮಹಾಡಿಕ್ ಅವರ ಒಡೆತನದಲ್ಲಿರುವ ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದ ವೆಂಕಟೇಶ್ವರ ಸಕ್ಕರೆ ಕಾರ್ಖಾನೆಯು ಸರ್ಕಾರ ನಿಗದಿಪಡಿಸಿದ ದರಕ್ಕಿಂತ 50 ರೂ. ಹೆಚ್ಚು ನೀಡಲು ಒಪ್ಪಿಗೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read