ಪತ್ನಿ ತಂಗಿಯೊಂದಿಗೆ ಹುಬ್ಬಳ್ಳಿಗೆ ಬಂದ ಭಾವ: ಆಟೋ ಚಾಲಕನ ಮನೆಯಲ್ಲಿ ಆತ್ಮಹತ್ಯೆ

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಭಾವ, ನಾದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯ ಮೊರಾರ್ಜಿ ನಗರದ ಆಟೋ ಚಾಲಕನ ಮನೆಯಲ್ಲಿ ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಪೀಣ್ಯ ನಿವಾಸಿ ಲೊಕೇಶರಾವ್ ಅಶೋಕರಾವ್(34), ಶಾಂತಾ ರಾಮೇಶ್ವರ ರಡ್ಡಿ(26) ಆತ್ಮಹತ್ಯೆ ಮಾಡಿಕೊಂಡವರು. ಪತ್ನಿಯ ತಂಗಿಯೊಂದಿಗೆ ಹುಬ್ಬಳ್ಳಿಗೆ ಬಂದಿದ್ದ ಲೋಕೇಶ್ ರಾವ್ ಆಟೋ ಬಾಡಿಗೆ ಪಡೆದುಕೊಂಡಿದ್ದಾನೆ. ಬೆಂಗಳೂರಿಗೆ ಹೋಗುವುದು ತಡವಾಗುತ್ತದೆ. ಸ್ವಲ್ಪ ಸಮಯ ರೆಸ್ಟ್ ಮಾಡಬೇಕಿದೆ ಎಂದು ಆಟೋ ಚಾಲಕನ ಬಳಿ ಕೇಳಿಕೊಂಡಿದ್ದಾರೆ. ಆಟೋ ಚಾಲಕ ಮಾರುತಿ ಜಾಧವ್ ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಇಬ್ಬರು ಒಂದೇ ವೇಲ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಳೆ ಹುಬ್ಬಳ್ಳಿ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read