ಕಚೇರಿಯಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ನೌಕರ ಪತ್ತೆ

ಮಂಗಳೂರು: ಮಂಗಳೂರಿನ ಉರ್ವ ಸ್ಟೋರ್ ನಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸ್ಟೋರ್ ರೂಂನಲ್ಲಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅಳಪೆ ನಿವಾಸಿ ಕೀರ್ತನ್(30) ಆತ್ಮಹತ್ಯೆ ಮಾಡಿಕೊಂಡವರು. ದ್ವಿತೀಯ ದರ್ಜೆ ಸಹಾಯಕರಾಗಿರುವ ಕೀರ್ತನ್ ಶುಕ್ರವಾರ ಬೆಳಗ್ಗೆ 9:30ಕ್ಕೆ ಕಚೇರಿಗೆ ಆಗಮಿಸಿ ಸಹೋದ್ಯೋಗಿಗಳ ಜೊತೆ ಮಾತನಾಡಿದ್ದಾರೆ. ಕೆಲ ಸಮಯದ ನಂತರ ಅವರು ನಾಪತ್ತೆಯಾಗಿದ್ದು, ಟೀ ಕುಡಿಯಲು ಹೊರಗೆ ಹೋಗಿರಬಹುದು ಎಂದು ಸಿಬ್ಬಂದಿ ಭಾವಿಸಿದ್ದಾರೆ.

ಮಧ್ಯಾಹ್ನ 12 ಗಂಟೆಯಾದರೂ ಕೀರ್ತನ್ ವಾಪಸ್ ಬಂದಿರಲಿಲ್ಲ. ನಂತರ ಕಚೇರಿ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದು, ಮೊಬೈಲ್ ಲೊಕೇಶನ್ ಪತ್ತೆ ಮಾಡಿದಾಗ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಆವರಣದಲ್ಲಿರುವುದು ಗೊತ್ತಾಗಿದೆ. ಹುಡುಕಾಟ ನಡೆಸಿದಾಗ ಕಚೇರಿಯ ಸ್ಟೋರ್ ರೂಮ್ ನಲ್ಲಿ ಕೀರ್ತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read