ಸಾವಿಗೆ ಮೊದಲು ಚಿಕಿತ್ಸೆ ಪಡೆಯುವಾಗಲೇ ಡೆತ್ ನೋಟ್ ಬರೆದ ಅಪ್ರಾಪ್ತೆ, ವಿಡಿಯೋ ಮಾಡಿದ ಪೋಷಕರು

ಚಿಕ್ಕಮಗಳೂರು: ಪ್ರೀತಿಯ ಹೆಸರಲ್ಲಿ ಅಪ್ರಾಪ್ತೆಗೆ ಯುವಕ ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು, ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಅಪ್ರಾಪ್ತ ಬಾಲಕಿ ಸಾವು ಕಂಡಿದ್ದಾಳೆ.

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ಚಿಕ್ಕಮಗಳೂರು ಜಿಲ್ಲೆ ಕುದುರೆಮುಖ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಯುವಕನ ಮೋಸಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆಗೆ ಯತ್ನಿಸಿದ್ದಳು.

ಜನವರಿ 10ರಂದು ಮನೆಯಲ್ಲಿದ್ದ ಕೀಟನಾಶಕ ಸೇವಿಸಿದ್ದ ಅಪ್ರಾಪ್ತೆ ಸಾವಿಗೂ ಮುನ್ನ ಆಸ್ಪತ್ರೆಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದಾಳೆ. ಮೋಸ ಮಾಡಿರುವ ಯುವಕನ ಹೆಸರು ಉಲ್ಲೇಖಿಸಲಾಗಿದೆ. ಪೋಷಕರು ಡೆತ್ ನೋಟ್ ಬರೆದಿರುವುದನ್ನು ವಿಡಿಯೋ ಮಾಡಿದ್ದಾರೆ. ಚಿಕಿತ್ಸೆ ಪಡೆಯುವ ವೇಳೆ ಡೆತ್ ನೋಟ್ ಬರೆದಿಟ್ಟಿದ್ದು, ಕುದುರೆಮುಖ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read