SHOCKING: ಪತ್ನಿ ತವರುಮನೆ ಎದುರಲ್ಲೇ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಇಂದೂರಕೊಪ್ಪ ಗ್ರಾಮದಲ್ಲಿ ಮಾವನ ಮನೆಯ ಎದುರಲ್ಲೇ ಅಳಿಯನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅರವಿಂದ ಚಿತ್ತರಗಿ(25) ಮೃತಪಟ್ಟ ವ್ಯಕ್ತಿ. ದೀಪಾವಳಿ ಹಬ್ಬದ ಅಂಗವಾಗಿ ಶನಿವಾರ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಆಗಮಿಸಿದ್ದ ಅರವಿಂದ ಹೆಣ್ಣು ಕೊಟ್ಟ ಮಾವನ ಮನೆ, ಪತ್ನಿಯ ತವರು ಮನೆ ಎದುರಲ್ಲಿ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಈ ವೇಳೆ ದೀಪಾವಳಿ ಪ್ರಯುಕ್ತ ಹಚ್ಚಿಡಲಾಗಿದ್ದ ದೀಪದಿಂದ ಏಕಾಏಕಿ ಬೆಂಕಿ ತಗುಲಿದೆ.

5 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಅರವಿಂದ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read