BREAKING: ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಮೇಲೆ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ

ಹಾವೇರಿ: ಹಾವೇರಿ ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಮೇಲೆ ರೌಡಿ ಶೀಟ್ ಇಲ್ಲ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ಯಾಸಿರ್ ಮೇಲೆ ರೌಡಿ ಶೀಟ್ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ ಹಾವೇರಿ ಎಸ್ಪಿ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಮೇಲೆ ರೌಡಿ ಶೀಟ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ವಿರುದ್ಧ ಈ ಹಿಂದೆಯೇ ರೌಡಿಶೀಟರ್ ಓಪನ್ ಆಗಿದೆ. ಅದನ್ನು ಈವರೆಗೂ ಹಿಂತೆಗೆದುಕೊಂಡಿಲ್ಲ ಎನ್ನಲಾಗಿತ್ತು. ಯಾಸೀರ್ ಓರ್ವ ರೌಡಿಶೀಟರ್ ಎಂದು ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಜ್ಜಂಪೀರ್ ಖಾದ್ರಿ ಕೂಡ ಹೇಳಿದ್ದರು. ಆದರೆ ಯಾಸೀರ್ ಇದನ್ನು ಅಲ್ಲಗಳೆದಿದ್ದರು. ಯಾಸೀರ್ ವಿರುದ್ಧ ರೌಡಿಶೀಟರ್ ಇದ್ದರೂ ನಾಮಪತ್ರ ಸಲ್ಲಿಕೆ ವೇಳೆ ಉಲ್ಲೇಖ ಮಾಡಿಲ್ಲ ಎಂದು ಹೇಳಲಾಗಿತ್ತು. ಇದೀಗ ಎಸ್ಪಿ ಸ್ಪಷ್ಟನೆ ನೀಡಿದ್ದು, ರೌಡಿ ಶೀಟ್ ಇಲ್ಲವೆಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read