BIG NEWS: ಭೂ ಪರಿಹಾರ ವಿಳಂಬವಾದಲ್ಲಿ ಹಾಲಿ ದರದಲ್ಲೇ ಪರಿಹಾರ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಭೂ ಪರಿಹಾರ ವಿಳಂಬವಾದರೆ ಹಾಲಿ ದರದಲ್ಲಿ ಪರಿಹಾರ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಆಸ್ತಿ ಹಕ್ಕು ಎಂಬುದು ಸಂವಿಧಾನಾತ್ಮಕ ಹಕ್ಕಾಗಿದ್ದು, ಕಾನೂನು ಪ್ರಕಾರ ಸೂಕ್ತ ಪರಿಹಾರ ನೀಡದೆ ಯಾವುದೇ ವ್ಯಕ್ತಿ ತನ್ನ ಹಕ್ಕಿನಿಂದ ವಂಚಿತವಾಗಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಬೆಂಗಳೂರು -ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರಾಜೆಕ್ಟ್ ರಸ್ತೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಜಾಗ ಕಳೆದುಕೊಂಡವರ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

22 ವರ್ಷಗಳಷ್ಟು ಹಳೆಯದಾದ ಈ ಪ್ರಕರಣದಲ್ಲಿ 2019ರ ಏಪ್ರಿಲ್ ಮಾರುಕಟ್ಟೆ ದರದಂತೆ ಅರ್ಜಿದಾರರಿಗೆ ಪರಿಹಾರ ನೀಡುವಂತೆ ಸಂಬಂಧಿಸಿದ ಭೂ ಸ್ವಾಧೀನ ಅಧಿಕಾರಿಗಳಿಗೆ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದಲ್ಲಿ ಸಂತ್ರಸ್ತರು 22 ವರ್ಷ ಕಾನೂನು ಹೋರಾಟ ನಡೆಸಿದ್ದಾರೆ. ಆದರೂ ಅವರಿಗೆ ಪರಿಹಾರ ವಿಳಂಬವಾಗಿದೆ. ಅಧಿಕಾರಿಗಳ ಜಡ ಮನಸ್ಥಿತಿಯೇ ಇದಕ್ಕೆ ಕಾರಣ ಎಂದು ಪರಿಹಾರ ವಿಳಂಬಕ್ಕೆ ತರಾಟೆಗೆ ತೆಗೆದುಕೊಂಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read