ಕಾಮಗಾರಿ ನಿರ್ವಹಿಸದೆ, ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ: ಅಧಿಕಾರಿಗಳ ಅಮಾನತು

ಬೀದರ್: ಕಾಮಗಾರಿ ನಿರ್ವಹಿಸದೆ ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ ಮಾಡಿಕೊಂಡಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಇಂಜಿನಿಯರ್ ಶಿವರಾಜ್ ಪಾಟೀಲ್, ಕೌಠಾ(ಬಿ) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಭುದಾಸ ಜಾಧವ್ ಅವರನ್ನು ಜಿಪಂ ಸಿಇಓ ಡಾ. ಗಿರೀಶ್ ದಿಲೀಪ್ ಬದೋಲೆ ಅಮಾನತು ಮಾಡಿದ್ದಾರೆ.

ಇವರಿಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಇಲಾಖೆ ಮೇಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಗ್ರಾಮದಲ್ಲಿ ಕಾಮಗಾರಿ ನಿರ್ವಹಿಸದೆ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕಾಮಗಾರಿ ಹಣ ದುರ್ಬಳಕೆ ಹಿನ್ನಲೆಯಲ್ಲಿ ಇವರನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read