ಆದಾಯಕ್ಕಿಂತ 216 ರಷ್ಟು ಅಧಿಕ ಆಸ್ತಿ ಗಳಿಸಿದ ಉಪ ವಿಭಾಗಾಧಿಕಾರಿ ಸಸ್ಪೆಂಡ್

ರಾಮನಗರ ಉಪ ವಿಭಾಗಾಧಿಕಾರಿ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಎಸಿಬಿ ವರದಿ ಆಧರಿಸಿ ಸಿ. ಮಂಜುನಾಥ್ ಅವರನ್ನು ಅಮಾನತುಗೊಳಿಸಲಾಗಿದೆ. 2022 ರ ಮಾರ್ಚ್ 16ರಂದು ಎಸಿಬಿ ಅಧಿಕಾರಿಗಳಿಂದ ಮಂಜುನಾಥ್ ಅವರ ಮನೆ, ಫಾರ್ಮ್ ಹೌಸ್, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು. ದಾಳಿಯ ವೇಳೆ ಅಕ್ರಮ ಆಸ್ತಿ ಸಂಬಂಧ ದಾಖಲೆ ದೊರೆತಿತ್ತು. ಆದಾಯಕ್ಕಿಂತ ಶೇಕಡ 216 ರಷ್ಟು ಅಧಿಕ ಅಕ್ರಮ ಆಸ್ತಿ ಬಗ್ಗೆ ವರದಿ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read