ಅಯ್ಯಪ್ಪನ ಭಕ್ತರಿಗೆ ಸಿಹಿ ಸುದ್ದಿ : ಶಬರಿಮಲೆಯಲ್ಲಿ ದರ್ಶನ ಪಡೆಯಲು ವಿಶೇಷ ಗೇಟ್ ವ್ಯವಸ್ಥೆ

ಕೇರಳ : ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಬರಿಮಲೆಯಲ್ಲಿ ಭಾರಿ ಜನಸಂದಣಿಯಿಂದಾಗಿ, ಕೆಲವು ಭಕ್ತರಿಗೆ ಅಯ್ಯಪ್ಪನ ನೇರ ದರ್ಶನ ಸಿಗುತ್ತಿಲ್ಲ.

ಹಲವು ಭಕ್ತರು ದರ್ಶನ ಪಡೆಯದೇ ಹಿಂತಿರುಗುತ್ತಿದ್ದಾರೆ. ತಿರುವಾಂಕೂರು ದೇವಸ್ವಂ ಮಂಡಳಿ (ಟಿಬಿಡಿ) ಈ ನಿಟ್ಟಿನಲ್ಲಿ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಅಯ್ಯಪ್ಪನ ದರ್ಶನಕ್ಕೆ ಬರುವ ಮಕ್ಕಳು ಸುಲಭವಾಗಿ ಮಣಿಕಂಠನ ದೇವಾಲಯವನ್ನು ತಲುಪಲು ಟಿಬಿಡಿ ವಿಶೇಷ ಗೇಟ್ ವ್ಯವಸ್ಥೆಯನ್ನು ಪರಿಚಯಿಸಿದೆ.

ಹೆಚ್ಚಿನ ಭಕ್ತರ ಸಂಖ್ಯೆಯಿಂದಾಗಿ ಚಿಕ್ಕ ಮಕ್ಕಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ಬಾಲಕಿಯೊಬ್ಬಳು ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಅವಳು ಸಾವನ್ನಪ್ಪಿದಳು. ಈ ಘಟನೆಯ ಹಿನ್ನೆಲೆಯಲ್ಲಿ ಮಕ್ಕಳಿಗೆ ವಿಶೇಷ ದರ್ಶನ ನೀಡಲು ಟಿಬಿಡಿ ನಿರ್ಧರಿಸಿದೆ. ಭಾನುವಾರ ಬೆಳಿಗ್ಗೆಯಿಂದ ಮಕ್ಕಳಿಗೆ ಮುಂದಿನ ಸಾಲಿನಲ್ಲಿ ಅಯ್ಯಪ್ಪನ ದರ್ಶನ ನೀಡಲಾಗಿದೆ.

ಇದರ ನಡುವೆ ಶಬರಿಮಲೆಯಲ್ಲಿ ಭಕ್ತರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ಭಾಗವಾಗಿ ಶೀಘ್ರದಲ್ಲೇ ವೈ-ಫೈ ಸೌಲಭ್ಯವನ್ನು ಸಹ ಒದಗಿಸಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಹೇಳಿದೆ. ಶಬರಿಮಲೆಯಲ್ಲಿ ಹೆಚ್ಚುತ್ತಿರುವ ಭಕ್ತರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ದರ್ಶನದ ಸಮಯವನ್ನು ಇನ್ನೂ ಒಂದು ಗಂಟೆ ವಿಸ್ತರಿಸುವುದಾಗಿ ಟಿಬಿಡಿ ಕಳೆದ ವಾರ ಘೋಷಿಸಿತ್ತು. ಇದಕ್ಕೂ ಮುನ್ನ ಎರಡನೇ ಹಂತದಲ್ಲಿ ಸಂಜೆ 4 ರಿಂದ ರಾತ್ರಿ 11 ರವರೆಗೆ ಅಯ್ಯಪ್ಪ ಭಕ್ತರಿಗೆ ದರ್ಶನ ನೀಡಲಾಯಿತು. ಈಗ ಮಧ್ಯಾಹ್ನ 3 ಗಂಟೆಯಿಂದ ದರ್ಶನ ಆರಂಭವಾಗಲಿದೆ. ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಕಾಯುತ್ತಿರುವ ಭಕ್ತರಿಗೆ ಟಿಬಿಡಿ ಕುಡಿಯುವ ನೀರು ಮತ್ತು ಬಿಸ್ಕತ್ತುಗಳನ್ನು ಒದಗಿಸುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read