ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ಈಜಲು ಹೋಗಿ ಯುವಕ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತ ವೀಕ್ಷಣೆಗೆ ಬಂದಿದ್ದ ಛತ್ತೀಸ್ಗಢ ಮೂಲದ ಪ್ರವಾಸಿಗ ಈಜಲು ಹೋಗಿ ಮೃತಪಟ್ಟಿದ್ದಾರೆ.

ಅಮಿತ್ ಕುಮಾರ್(39) ಮೃತಪಟ್ಟ ಪ್ರವಾಸಿಗ. ಮೂಲತಃ ಛತ್ತೀಸ್ಗಢದ ಅಮಿತ್ ಕುಮಾರ್ ಬೆಂಗಳೂರಿನಲ್ಲಿ ವಾಸವಾಗಿದ್ದು, ಭಾನುವಾರ ಸ್ನೇಹಿತರೊಂದಿಗೆ ಕೆಮ್ಮಣ್ಣುಗುಂಡಿ, ಸಮೀಪದ ಹೆಬ್ಬೆ ಜಲಪಾತ ವೀಕ್ಷಣೆಗೆ ಆಗಮಿಸಿದ್ದಾರೆ.

ಜಲಪಾತ ವೀಕ್ಷಣೆ ಬಳಿಕ ಸಮೀಪದಲ್ಲಿ ಈಜಲು ಹೋಗಿದ್ದ ಅವರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ತರೀಕೆರೆ ಆಸ್ಪತ್ರೆಗೆ ರವಾನಿಸಲಾಗಿದೆ. ಲಿಂಗದಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read