ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಹಶೀಲ್ದಾರ್ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ಮಂಜುನಾಥ ಹಿರೇಮಠ ಲೋಕಾಯುಕ್ತ ಬಲೆಗೆ ಬಿದ್ದವರು.

ಕೆಂಪು ಮಣ್ಣು ಸಾಗಾಣಿಕೆಗೆ ತಹಶೀಲ್ದಾರ್ ಖಾಸಗಿ ವ್ಯಕ್ತಿಯಿಂದ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ಹಿನ್ನಲೆಯಲ್ಲಿ ದೂರು ನೀಡಲಾಗಿತ್ತು. ಲಂಚ ಸ್ವೀಕರಿಸುವಾಗಲೇ ದಾಳಿ ನಡೆಸಲಾಗಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಕೆಂಪು ಮಣ್ಣು ಸಾಗಾಣೆಗೆ ಲಂಚದ ಬೇಡಿಕೆ ಇಟ್ಟಿದ್ದ ತಹಶೀಲ್ದಾರ್ ವಿರುದ್ಧ ವ್ಯಕ್ತಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಒಂದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು, ಖಾಸಗಿ ವ್ಯಕ್ತಿ ರಾಜು ಮೂಲಕ 50,000 ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read