ಕಚೇರಿಯಲ್ಲೇ ಲಂಚ ಪಡೆಯುತ್ತಿದ್ದ ತಹಶೀಲ್ದಾರ್, ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಕಲಬುರಗಿ: ಲಂಚ ಪಡೆಯುವಾಗಲೇ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕು ತಹಶೀಲ್ದಾರ್ ಮತ್ತು ರೆವಿನ್ಯೂ ಇನ್ಸ್ ಪೆಕ್ಟರ್ ತಹಶೀಲ್ದಾರ್ ಕಚೇರಿಯಲ್ಲಿಯೇ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಆಳಂದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಮತ್ತು ಕಂದಾಯ ನಿರೀಕ್ಷಕ ರಾಜಶೇಖರ್ ಜಮೀನಿಗೆ ಕೃಷಿಯೇತರ ಪ್ರಮಾಣ ಪತ್ರ ನೀಡಲು 12 ಸಾವಿರ ರೂಪಾಯಿ ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ.

ಮೆಹಬೂಬ ಪಟೇಲ ಅವರಿಂದ 12 ಸಾವಿರ ರೂಪಾಯಿ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read