ರಸ್ತೆಯಲ್ಲಿ ಸಿಕ್ಕ ಮಾಂಗಲ್ಯ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ ಟೈಲರ್

ಶಿವಮೊಗ್ಗ: ತಮಗೆ ದೊರೆತ ಮಾಂಗಲ್ಯ ಸರವನ್ನು ಮಹಿಳೆಗೆ ಮರಳಿಸುವ ಮೂಲಕ ಶಿವಮೊಗ್ಗದ ಬಿಹೆಚ್ ರಸ್ತೆಯ ಸಂಗಮ್ ಟೈಲರ್ ಮಾಲೀಕ ಕುಮಾರ್ ಪ್ರಾಮಾಣಿಕತೆ ಮೆರೆದಿದ್ದಾರೆ.

ಶಿವಮೊಗ್ಗದ ಬುದ್ದನಗರ ನಿವಾಸಿ ರಾಜೇಶ್ವರಿ ತಮ್ಮ ಪುತ್ರಿಯೊಂದಿಗೆ ಶನಿವಾರ ಬಿಹೆಚ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುವಾಗ 32 ಗ್ರಾಂ ತೂಕದ ಮಾಂಗಲ್ಯ ಸರ ಕಳೆದುಕೊಂಡಿದ್ದಾರೆ. ಈ ಬಗ್ಗೆ ಅವರು ಕೋಟೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದೇ ದಿನ ಕುಮಾರ್ ಅವರಿಗೆ ಸರ ಸಿಕ್ಕಿದೆ. ಅವರು ಭಾನುವಾರ ಬೆಳಿಗ್ಗೆ ಕೋಟೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ ಸ್ಪೆಕ್ಟರ್ ಗುರು ಬಸವರಾಜ್ ಅವರು ರಾಜೇಶ್ವರಿ ಅವರನ್ನು ಠಾಣೆಗೆ ಕರೆಸಿ ಮಾಂಗಲ್ಯ ಸರ ಹಸ್ತಾಂತರಿಸಿದ್ದಾರೆ. ಕುಮಾರ್ ಅವರ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read