ಉಚಿತ ಸೀರೆ – ಪಂಚೆ ಪಡೆಯಲು ನೂಕು ನುಗ್ಗಲು; ನಾಲ್ವರು ಮಹಿಳೆಯರ ಸಾವು

ತಮಿಳುನಾಡಿನ ಜನತೆ ಶ್ರದ್ಧಾ ಭಕ್ತಿಯಿಂದ ಆಚರಿಸುವ ತೈಪೂಸಂ ಹಿನ್ನಲೆಯಲ್ಲಿ ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿಯಲ್ಲಿ ವ್ಯಕ್ತಿಯೊಬ್ಬರು ಬಡ ಮಹಿಳೆಯರಿಗೆ ಉಚಿತವಾಗಿ ಸೀರೆ ಮತ್ತು ಪುರುಷರಿಗೆ ಪಂಚೆ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.

ಶನಿವಾರದಂದು ಈ ಘಟನೆ ಸಂಭವಿಸಿದ್ದು, ಉಚಿತ ಸೀರೆ ಮತ್ತು ಪಂಚೆ ವಿತರಿಸುವ ಸಲುವಾಗಿ ಟೋಕನ್ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಸ್ಥಳದಲ್ಲಿ ಪೊಲೀಸರು ಸಹ ಬಂದೋಬಸ್ತಿಗಾಗಿ ಬೀಡು ಬಿಟ್ಟಿದ್ದರು. ಆದರೆ ನಿರೀಕ್ಷೆಗೂ ಮೀರಿದ ಜನ ಆಗಮಿಸಿದ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

ಅಪಾರ ಜನಜಂಗುಳಿಯಿಂದ ಉಂಟಾದ ಕಾಲ್ತುಳಿತದಲ್ಲಿ ಹಲವರು ಗಾಯಗೊಂಡಿದ್ದು, ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಮಾಹಿತಿ ಪಡೆದುಕೊಂಡಿರುವ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಮಗ್ರ ತನಿಖೆ ನಡೆಸುವಂತೆ ತಿರುಪತ್ತೂರು ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read