BIG NEWS: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ

ಚೆನ್ನೈ: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ.

ತಿರುಚ್ಚಿ-ಮದುರೈ ಹೆದ್ದಾರಿಯ ನವಸಮುತಿರಂ ಬಳಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಐವರು ಶವವಾಗಿ ಪತ್ತೆಯಾಗಿದ್ದಾರೆ. ವಾಚ್ ಮೆನ್ ಓರ್ವರು ನಿಂತಿದ್ದ ಕಾರನ್ನು ಪರಿಶೀಲಿಸಿದಾಗ ಐವರು ಸಾವನಪ್ಪಿರುವುದು ತಿಳಿದುಬಂದಿದೆ.

ಮೃತರನ್ನು ಸೇಲಂ ನ ಮಣಿಗಂದನ್, ಪತ್ನಿ ನಿತ್ಯಾ ಹಾಗೂ ಕುಟುಂಬ ಸದಸ್ಯರು ಎಂದು ಗುರುತಿಸಲಾಗಿದೆ. ಮಣಿಗಂಧನ್ ಸೇಲಂ ಹಾಗೂ ಕೃಷ್ಣಗಿರಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ತೀವ್ರ ನಷ್ಟದಲ್ಲಿದ್ದರು ಎಂದು ತಿಳಿದುಬಂದಿದೆ. ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read